ಪುಟಗಳು

Translate

ಭಾನುವಾರ, ಜನವರಿ 26, 2025

ಡಾ. ಸಿದ್ದಲಿಂಗ ದಬ್ಬಾ.


ಸಾಹಿತಿ ಡಾ. ಸಿದ್ದಲಿಂಗ ದಬ್ಬಾ ರವರು  ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬಂಟನಳ್ಳಿ ಗ್ರಾಮದ ಶ್ರೀ ಮುರಿಗೆಪ್ಪ ಮತ್ತು ಲಕ್ಷ್ಮೀಬಾಯಿ ರೈತ ದಂಪತಿಗಳ ಜೇಷ್ಠ ಪುತ್ರರಾಗಿ ದಿನಾಂಕ 1-6-1977 ರಲ್ಲಿ ಜನಿಸಿದರು.

 ತಾಯಿ ಮತ್ತು ಅಜ್ಜಿಯ ವಾತ್ಸಲ್ಯದಲ್ಲಿ ಬೆಳೆದ ದಬ್ಬಾ ಅವರು ಜೀವನದಲ್ಲಿ ಪರಿಶ್ರಮ, ಶಿಸ್ತು, ಸೌಜನ್ಯವನ್ನು ಮೈಗೂಡಿಸಿಕೊಂಡು ವಿದ್ಯೆ ವಿನಯ ಅವರ ಗುಣಗಳಾಗಿರುವವು. ಬಂಟನಳ್ಳಿ, ಸುಲೇಪೇಟ, ಸೇಡಂ, ಕಲಬುರಗಿಯಲ್ಲಿ ಹಂತ ಹಂತವಾಗಿ ಶಿಕ್ಷಣ ಪಡೆದು ಗುಲಬರ್ಗಾ ವಿಶ್ವವಿದ್ಯಾಲಯದಿಂದ 2003 ರಲ್ಲಿ ಕನ್ನಡ ಮತ್ತು ಜಾನಪದದಲ್ಲಿ ಎಂ.ಎ. ಸ್ನಾತಕೋತ್ತರ ಪದವಿ ಪೂರೈಸಿ  ಪ್ರಥಮ ಶ್ರೇಣಿಯೊಂದಿಗೆ ಎರಡು ಚಿನ್ನದ ಪದಕ ಪಡೆದ-ಶ್ರೇಯಸ್ಸಿಗೆ ಭಾಜನರಾಗಿದ್ದಾರೆ. ಇದರ ಜೊತೆಗೆ ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಎಡ್. ಶಿಕ್ಷಣ ಪದವಿ ಕೂಡ ಪಡೆದಿರುವರು. 2009 ರಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದಿಂದ ನಡುಗನ್ನಡ ವೀರಶೈವ ಕಾವ್ಯಗಳ ಜಾನಪದ ಅಧ್ಯಯನ ಕುರಿತು ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪಡೆದುಕೊಂಡಿರುವರು. ವಿದ್ಯಾರ್ಥಿ ದೆಸೆಯಿಂದಲೇ ಪರಿಸರ, ಜನಪದ, ಸಾಹಿತ್ಯ, ವಿಮರ್ಶೆಗಳಲ್ಲಿ ಒಲವು ಬೆಳೆಸಿಕೊಂಡ ಡಾ. ಸಿದ್ದಲಿಂಗ ದಬ್ಬಾ ರವರು ಕೆಲ ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ಅವುಗಳಲ್ಲಿ
  'ಐನೂಲಿ ಕರಿಬಸವಾರ್ಯರು'
(2006), ಸಾಹಿತ್ಯ ಸಂಭ್ರಮ (2007), ಕನ್ನಡ ವ್ಯಾಕರಣ ಮತ್ತು ವ್ಯಾಕರಣ ಬೋಧನಾ ವಿಧಾನ (2012), ನುಡಿಗಡಣ (2013), ಸಾಹಿತ್ಯ ಸಿಂಚನ (2018), ಕಲಬುರಗಿ ಜಿಲ್ಲೆಯ ಸಾಹಿತಿಗಳು (2018), ಸಮನ್ವಯ (2022), ಶರಣಮಾರ್ಗ (2022) ಮುಂತಾದ ಕೃತಿಗಳನ್ನು ಪ್ರಕಟಿಸಿದ್ದಾರೆ. ಮತ್ತು ಅನೇಕ ಪತ್ರಿಕಾ ಬರಹ, ವಿಚಾರ ಸಂಕಿರಣಗಳಲ್ಲಿ ಮೌಲಿಕ ಪ್ರಬಂಧಗಳನ್ನು ಸಲ್ಲಿಸಿ ವಿದ್ವಾಂಸರ ಗಮನ ಸೆಳೆದ ಯುವ ಬರಹಗಾರರು, ಇವರ ನಡುಗನ್ನಡ ವೀರಶೈವ ಕಾವ್ಯಗಳ ಅಧ್ಯಯನಕ್ಕಾಗಿ ಸಿದ್ದಾಂತ ಶಿಖಾಮಣಿ ಪ್ರವಚನ ವೇದಿಕೆಯ ಪ್ರಶಸ್ತಿ, ಧಾರವಾಡದ ಬಾಲವಿಕಾಸ ಅಕಾಡೆಮಿ ಪ್ರಶಸ್ತಿಗಳಿಗೂ ಪಾತ್ರರಾಗಿರುವರು. ಶಿಕ್ಷಣ ಕ್ಷೇತ್ರದ ಸಾಧನೆಗಾಗಿ
ಬೆಂಗಳೂರಿನ ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆ 2021ರಲ್ಲಿ 'ಶಿಕ್ಷಣ ರತ್ನ' ಪ್ರಶಸ್ತಿ ನೀಡಿ ಗೌರವಿಸಿದೆ. ಶರಣ ಮಾರ್ಗ ಕೃತಿಗೆ ಕಲಬುರಗಿಯ ಪಾಳಾ ಗ್ರಾಮದ ಶ್ರೀ.ಸುಭಾಶ್ಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್ ವತಿಯಿಂದ
(2024)ರಲ್ಲಿ ಬಸವ ಪುರಸ್ಕಾರ ಲಭಿಸಿದೆ. ಡಾ. ದಬ್ಬಾ ಅವರು ಈಗ ಸರಕಾರಿ ಮಹಾವಿದ್ಯಾಲಯ ಸ್ವಾಯತ್ಯ
ಕಲಬುರಗಿಯಲ್ಲಿ ಅತಿಥಿ ಉಪನ್ಯಾಸಕರೆಂದು ಕಾರ್ಯ ನಿರ್ವಹಿಸುತ್ತಿದ್ದಾರೆ.

ಗುರುವಾರ, ಜನವರಿ 23, 2025



ಡಾ. ಪ್ರಮೀಳಾ ಎಸ್ ಪಾಟೀಲ್ ಬಿಬ್ಬಳ್ಳಿ.

ಕವಯತ್ರಿಯರಾದ ಡಾ.ಪ್ರಮೀಳಾ ಎಸ್ ಪಾಟೀಲ್ ಬಿಬ್ಬಳ್ಳಿ ರವರು ಮೂಲತಃ ಬಾಗಲಕೋಟೆ ಜಿಲ್ಲೆಯ ಹನಗುಂದ ತಾಲೂಕಿನ ಇಂಗಳಗಿ ಗ್ರಾಮದವರು. ಇವರು ಹನಮಗೌಡ ಪಾಟೀಲ್ ಮತ್ತು ಶಾಂತಮ್ಮ ದಂಪತಿಗಳಿಗೆ ದಿನಾಂಕ ̆1-6-1968ರಲ್ಲಿ ಜನಿಸಿದ್ದಾರೆ. ಎಂ ಎ. ಎಂ ಎಡ್ ಪದವೀಧರರು .
 1998 ರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ  ಸೇವೆಗೆ ಸೇರಿ ಸದ್ಯ ಸೇಡಂ ತಾಲೂಕಿನ ಯಡಗಾ ಗ್ರಾಮದ ಶ್ರೀ ಮಲ್ಕಪ್ಪ ಹಳಖೇಡ ಸರಕಾರಿ ಪ್ರೌಢ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಬಾಲ್ಯದಿಂದಲೂ ಕಲೆ ಸಾಹಿತ್ಯ ನೃತ್ಯದ ಅಭಿರುಚಿ ಹೊಂದಿದ ಇವರು ಸಾಹಿತ್ಯ ರಚನೆಯಲ್ಲಿ ತೊಡಗಿ
೨೦೨೪ ರಲ್ಲಿ ಕೆಲ ಪುಸ್ತಕಗಳು ಪ್ರಕಟಿಸಿದ್ದಾರೆ.
 ಅವುಗಳೆಂದರೆ:  ಅರಳಿದ ಮೊಗ್ಗು,, ನನ್ನ ಶಾಲಾ ಮಕ್ಕಳೇ (ಕವನ ಸಂಕಲನಗಳು) ಚಿಣ್ಣರ ಚಿಲಿಪಿಲಿ (ಸಂಪಾದನೆ) ಎಂಬ ಕೃತಿಗಳು ಪ್ರಕಟಿಸಿದ್ದಾರೆ. ಇವರು ಬರೆದ ಕವನ, ಲೇಖನ ಮೊದಲಾದ ಬರಹಗಳು ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಇವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ, ಸದ್ಭಾವನ ಪ್ರಶಸ್ತಿ, ಗಡಿನಾಡ ಪ್ರಶಸ್ತಿ, ರಾಜ್ಯಪಾಲರಿಂದ ಉತ್ತಮ ಗೈಡ್ ಪ್ರಶಸ್ತಿ, ಬಸವ ಪ್ರಶಸ್ತಿ.ಇನ್ನೂ ಅನೇಕ ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.


ಶನಿವಾರ, ಜನವರಿ 18, 2025

ಚನ್ನಣ್ಣ ವಾಲಿಕಾರ

ಕರ್ನಾಟಕದ ಪ್ರಖ್ಯಾತ ಬಂಡಾಯ ಸಾಹಿತಿಗಳಲ್ಲಿ ತುಂಬ ಹೆಸರು ಪಡೆದವರಲ್ಲಿ ಚೆನ್ನಣ್ಣ ವಾಲಿಕಾರರು ಒಬ್ಬರು. ಇವರು ಗುಲಬರ್ಗಾ ಜಿಲ್ಲೆಯ ಚಿತ್ತಾಪುರ ತಾಲ್ಲೂಕು ಶಂಕರವಾಡಿ ಗ್ರಾಮದಲ್ಲಿ ಹುಟ್ಟಿದರು.ತಂದೆ ಧೂಳಪ್ಪ ವಾಲೀಕಾರ, ತಾಯಿ ಸಾಬಮ್ಮ. ಇವರು ಕುಸ್ತಿ, ಹಾಡುಗಾರಿಕೆ, ಬಯಲಾಟದ ಒಕ್ಕಲುತನದ ಮನೆತನದವರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಶಹಬಾದನಲ್ಲಿ, ಕಲಬುರಗಿ ಶರಣ ಬಸವೇಶ್ವರ ಕಲಾ ಕಾಲೇಜಿನಲ್ಲಿ ಬಿ.ಎ. ಪದವಿ, ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದಿಂದ ಸ್ನಾತಕೋತ್ತರ ಶಿಕ್ಷಣ ಪಡೆದರು. ಮತ್ತು ‘ಹೈದರಾಬಾದ್ ಕರ್ನಾಟಕದ ಗ್ರಾಮದೇವತೆಗಳ ಜಾನಪದೀಯ ಅಧ್ಯಯನ’ ಪ್ರಬಂಧ ಮಂಡಿಸಿ ಪಿಎಚ್.ಡಿ ಪದವಿ ಪಡೆದಿದ್ದಾರೆ. ವೃತ್ತಿ ಜೀವನ : ಪದವಿಯ ನಂತರ ಉದ್ಯೋಗಕ್ಕೆ ಸೇರಿದ್ದು ಪ್ರೌಢಶಾಲಾ ಶಿಕ್ಷಕರಾಗಿ ೧೯೬೫-೬೯ರವರೆಗೆ ; ರಾಯಚೂರಿನ ಕಾಲೇಜು ಉಪನ್ಯಾಸಕರಾಗಿ ೧೯೭೧-೭೮ರವರೆಗೆ, ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ೧೯೮೭-೨೦೦೩ರವರೆಗೆ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿ 25-11-2019 ರಂದು ನಿಧನರಾದರು. ಇವರು ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾಗಿ, ಅಕಾಡೆಮಿಕ್ ಕೌನ್ಸಿಲ್ ಸದಸ್ಯ ಸೆನೆಟ್ ಸದಸ್ಯರಾಗಿ, ಸಿಂಡಿಕೇಟ್ ಸದಸ್ಯರಾಗಿ, ರಾಷ್ಟ್ರೀಯ ಸೇವಾ ಯೋಜನೆಯ ಸಮನ್ವಯಾಕಾರಿ ಪ್ರಸಾರಾಂಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದರು. ಬೀದರ ಜಿಲ್ಲಾ ಸಾಹಿತಿಗಳ ಪರಿಚಯ ಓದಿರಿ ಚೆನ್ನಣ್ಣ ವಾಲೀಕಾರರು ಹಲವಾರು ಕೃತಿಗಳು ರಚಿಸಿದ್ದಾರೆ. ಅವುಗಳಲ್ಲಿ, ಮರದ ಮೇಲಿನ ಗಾಳಿ, ಕರಿತೆಲಿ ಮಾನವನ ಜೀಪದ, ಹಾಡಕ್ಕಿ ಹಾಗು ಇತರ ಪದಗಳು, ಬಂಡೆದ್ದ ದಲಿತರ ಬೀದಿ ಹಾಡುಗಳು, ಧಿಕ್ಕಾರದ ಹಾಡುಗಳು, ಪ್ಯಾಂಥರ್ ಪದ್ಯಗಳು, ಕಥನ ಕವನಗಳು, ಎಂಬ ಕವನ ಸಂಕಲನಗಳು ಮತ್ತು 'ವ್ಯೋಮಾವ್ಯೋಮ' ಎಂಬ ಮಹಾಕಾವ್ಯ ರಚಿಸಿದ್ದಾರೆ. ಮತ್ತು ‘ಹೈದರಾಬಾದ್ ಕರ್ನಾಟಕದ ಗ್ರಾಮದೇವತೆಗಳ ಜಾನಪದೀಯ ಅಧ್ಯಯನ’ ಎಂಬುದು ಅವರ ಮಹಾ ಪ್ರಬಂಧವಾಗಿದೆ. ಅಷ್ಟೇಯಲ್ಲದೆ ಇವರು ಕೆಲ ಕಥಾಸಂಕಲನಗಳು ಪ್ರಕಟಿಸಿದ್ದು ಅವುಗಳಲ್ಲಿ, ಕಪ್ಪು ಕಥೆಗಳು, ಕುತ್ತದಲ್ಲಿ ಕುದ್ದವರ ಕಥೆಗಳು, ಹೆಪ್ಪುಗಟ್ಟಿದ ಸಮುದ್ರ ಪ್ರಮುಖವಾಗಿವೆ. ಮತ್ತು ಟೊಂಕದ ಕೆಳಗಿನ ಜನ, ಅಗ್ನಿರಾಜ, ತಲೆ ಹಾಕುವವರು, ಕೂಸಿನ ಕಂಡಿರಾ, ಅವಿವೇಕಿ ರಾಜನ ಕಥೆ, ಜೋಗತಿ. ಇವು ಅವರ ಪ್ರಮುಖ ನಾಟಕ ಕೃತಿಗಳಾಗಿವೆ. ಕಾದಂಬರಿ ಕ್ಷೇತ್ರದಲ್ಲಿಯು ಸಾಹಿತ್ಯ ರಚಿಸಿದ ಚನ್ನಣ್ಣನವರು: ಒಂದು ಹೆಣ್ಣಿನ ಒಳಜಗತ್ತು, ಕೋಟೆಬಾಗಿಲು, ಹುಲಿಗೆಮ್ಮ, ಗ್ರಾಮಭಾರತ, ಬೆಳ್ಯ. ಎಂಬ ಕಾದಂಬರಿಗಳು ರಚಿಸಿದ್ದಾರೆ. ಇವರು ಆರು ಡೆಪ್ಪಿನಾಟಗಳು.ಕೂಡ ರಚಿಸಿದ್ದಾರೆ. ಇವರ ಸಾಹಿತ್ಯ ಸಾಧನೆಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ. ಅವುಗಳಲ್ಲಿ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ನಾಟಕ ಅಕಾಡಮಿ ಪ್ರಶಸ್ತಿ. ಸಂಗೊಳ್ಳಿ ರಾಯಣ್ಣ ಪ್ರಶಸ್ತಿ. ವಿಶ್ವೇಶ್ವರಯ್ಯ ತಾಂತ್ರಿಕ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಪಡೆದಿದ್ದಾರೆ.

ಗುರುವಾರ, ಜನವರಿ 16, 2025

ಗೀತಾ ನಾಗಭೂಷಣ

ಕಲಬುರಗಿ ಜಿಲ್ಲೆಯ ಪ್ರಖ್ಯಾತ ಲೇಖಕಿ ಗೀತಾ ನಾಗಭೂಷಣ ರವರು ಕನ್ನಡ ಸಾಹಿತ್ಯದ ಪ್ರಸಿದ್ಧ ಬರಹಗಾರ್ತಿಯ ರಲ್ಲೊಬ್ಬರು. ಮೊಘಲಾಯಿ ಪರಿಸರದ ಪ್ರಮುಖ ಲೇಖಕಿ ಎಂದು ಪ್ರಖ್ಯಾತರಾಗಿರುವ ನಾಡೋಜ ಗೀತಾ ನಾಗಭೂಷಣ, ತಮಗಿದ್ದ ಕಿತ್ತು ತಿನ್ನುವ ಬಡತನ, ಅಸಹಕಾರಕ ಪರಿಸರ, ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸದ ಸಾಮಾಜಿಕ ವ್ಯವಸ್ಥೆ ಇತ್ಯಾದಿಗಳನ್ನೆಲ್ಲಾ ದೃಢಸಂಕಲ್ಪ ಮತ್ತು ಹೋರಾಟದ ಮನೋಭಾವಗಳಿಂದ ದಾಟಿ ತಮ್ಮ ಎಡೆಬಿಡದ ಪರಿಶ್ರಮದಿಂದ ಬಿ.ಎ, ಬಿ.ಎಡ್, ಎಂ.ಎ ಪದವಿಗಳನ್ನು ಪಡೆದು ಬಹುಕಾಲ ಅಧ್ಯಾಪನ ವೃತ್ತಿಯನ್ನೂ ನಡೆಸಿದವರು. ಜೊತೆಗೆ ತಮ್ಮ ಶಿಕ್ಷಕ ವೃತ್ತಿ, ಬರಹ ಪ್ರವೃತ್ತಿ ಮತ್ತು ನಡೆಗಳಿಂದ ಸಮಾಜಕ್ಕೆ ಬೆಳಕು ಕಾಣಿಸುವಲ್ಲಿ ನಿರಂತರ ಪ್ರಯತ್ನ ಶೀಲರಾದವರು. ಗೀತಾ ನಾಗಭೂಷಣ ರವರು ಕಲ್ಬುರ್ಗಿ ಜಿಲ್ಲೆಯ ಸಾವಳಗಿ ಎಂಬ ಚಿಕ್ಕ ಹಳ್ಳಿಯಲ್ಲಿ ಮಾರ್ಚ್ 25.1942ರಲ್ಲಿ ಶಾಂತಪ್ಪ ಮತ್ತು ಶರಣಮ್ಮದಂಪತಿಗಳ ಪ್ರೀತಿಯ ಮಗಳಾಗಿ ಜನಿಸಿದರು. ಕಲ್ಬುರ್ಗಿಯ ಕನ್ಯಾ ಪ್ರೌಢ ಶಾಲೆಯ ವಿದ್ಯಾರ್ಥಿನಿಯಾಗಿದ್ದರು. ಪ್ರಾಥಮಿಕ ವಿದ್ಯಾಭ್ಯಾಸವನ್ನು ಹುಟ್ಟೂರಿನಲ್ಲಿಯೇ ಮುಗಿಸಿದ ಅವರು ಗುಲ್ಬರ್ಗಾದ ಕಲೆಕ್ಟರ್ ಆಫೀಸಿನಲ್ಲಿ ಗುಮಾಸ್ತೆಯ ಕೆಲಸಕ್ಕೆ ಸೇರಿದರು. ಅಲ್ಲಿ ದುಡಿಯುತ್ತಲೇ, ಶರಣಬಸವೇಶ್ವರ ಕಲಾ ಕಾಲೇಜಿನಲ್ಲಿ ಪದವಿಗಳಿಸಿದರು. ಬಿ. ಎ. ಮುಗಿಸಿದ ನಂತರ, ಗುಮಾಸ್ತ ಹುದ್ದೆಯನ್ನು ತೊರೆದು, ಶರಣಬಸಪ್ಪ ಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಸೇರಿ, ಬಿ. ಎಡ್ ಮುಗಿಸಿದರು. ತದನಂತರ, ಸೊಲ್ಲಾಪುರದ ಕಾಲೇಜಿನಿಂದ ಸ್ನಾತಕೋತ್ತರ ಪದವಿಯನ್ನೂ ಗಳಿಸಿದರು. ಗುಲ್ಬರ್ಗಾದ ನಾಗೇಶ್ವರ ಸಂಯುಕ್ತ ಪದವೀಪೂರ್ವ ಕಾಲೇಜಿನಲ್ಲಿ ಅಧ್ಯಾಪಕಿಯಾಗಿ, ಅಲ್ಲಿಯೇ ಪ್ರಾಂಶುಪಾಲರೂ ಆಗಿ, ಒಟ್ಟು ಮೂವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದರು. ಇವರ ಸಾಹಿತ್ಯ ಕೃತಿ ತುಂಬ ವಿಪುಲವಾಗಿದೆ ಅವರು 1968ರ ವರ್ಷದಲ್ಲಿ ಪ್ರಕಟಗೊಂಡ ‘ತಾವರೆಯ ಹೂವು ಕಾದಂಬರಿಯಿಂದ ಮೊದಲ್ಗೊಂಡು ಇತ್ತೀಚಿನ ‘ಬದುಕು ’ ಕಾದಂಬರಿಯವರೆಗೆ ಇಪ್ಪತ್ತೇಳು ಕಾದಂಬರಿಗಳನ್ನು ಪ್ರಕಟಿಸಿದ್ದಾರೆ. ಅವರ ‘ಬದುಕು’ ಕಾದಂಬರಿಗೆ 2004ರ ವರ್ಷದ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಪಡೆದಿದೆ. ಮತ್ತು ಅವರ 'ಹಸಿಮಾಂಸ ಮತ್ತು ಹದ್ದುಗಳು' ಎನ್ನುವ ಕಾದಂಬರಿಯು ಹೆಣ್ಣಿನ ಕೂಗು ಎಂಬ ಹೆಸರಿನಲ್ಲಿ ಚಲನಚಿತ್ರವಾಗಿದೆ. ಒಟ್ಟು 27 ಸ್ವತಂತ್ರ ಕಾದಂಬರಿ, 50 ಸಣ್ಣ ಕಥೆಗಳು, 12 ನಾಟಕಗಳು, ಒಂದು ಸಂಪಾದನಾ ಕೃತಿ, ಒಂದು ಸಂಶೋಧನಾ ಕೃತಿ ಹೀಗೆ ಅವರ ಕನ್ನಡ ಸಾಹಿತ್ಯಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. 76 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷಣಿಯಾಗಿ ಆಯ್ಕೆ: 2010 ರಲ್ಲಿ ಗದಗನಲ್ಲಿ ನಡೆದ 76ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯಲ್ಲಿ ಡಾ. ಗೀತಾ ನಾಗಭೂಷಣರು ಹೇಳಿದ ಮಾತುಗಳು ಮಾರ್ಮಿಕವಾಗಿವೆ. “ವಚನಕಾರರು, ಹರಿದಾಸರು, ತತ್ವಪದಕಾರರು, ಜನಪದರು ಅಂದು ತಮ್ಮ ಸಾಹಿತ್ಯದಿಂದ ಸಾವಿರಾರು ವರ್ಷಗಳ ಉದ್ದಕ್ಕೂ ಮಾಡಿಕೊಂಡು ಬಂದ ಜನಜಾಗೃತಿ, ಶಾಂತಿ ಸೌಹಾರ್ದತೆ, ಪ್ರೀತಿ ವಾತ್ಸಲ್ಯ, ಕ್ರಾಂತಿ ಚಳುವಳಿಗಳ ಮೂಲಕ ಸುಧಾರಣೆ ಮತ್ತು ಜನಹಿತಕಾರ್ಯವನ್ನು ಇಂದಿನ ಸಾಹಿತಿಗಳೂ ಸಾಧಿಸಿ ತೋರಿಸಬೇಕಾಗಿದೆ. ಬರೀ ಶಬ್ದಾಡಂಬರದ ರಂಜನೀಯ ಸಾಹಿತ್ಯ ನಮಗೆ ಬೇಡ, ಸಾಹಿತ್ಯ ಒಂದು ಮಾನಸಿಕ ಸುಧಾರಣೆಯ ಸಾಧನ. ಅದು ಸಮಾಜದ ಅಭ್ಯುದಯಕ್ಕಾಗಿ ದುಡಿಯುವಂತಾಗಬೇಕು. ವಿಜ್ಞಾನಿಯ ತಲೆ, ಸಂತನ ಹೃದಯ ಈ ದೇಶಕ್ಕೆ ಬೇಕು. ಬುದ್ಧನ ಕರುಣೆ, ಬಸವನ ಛಲ, ಬಾಬಾ ಸಾಹೇಬ್ ಅಂಬೇಡ್ಕರ್ ರ ಸ್ವಾಭಿಮಾನ ಮತ್ತು ಗಾಂಧೀಜಿಯ ಅಹಿಂಸೆಯ ತುಡಿತ ಈ ಎಲ್ಲವನ್ನೂ ಹುರಿಗೊಳಿಸಿ ಹೊಸೆದ ಹಗ್ಗದಿಂದಲೇ ನಾವು ಸರ್ವರ ಅಭ್ಯುದಯ ಸಾಧಿಸಬಲ್ಲ ನಭೋಸ್ಪರ್ಶಿ ವ್ಯವಸ್ಥೆಗೆ ಏಣಿ ಕಟ್ಟಬೇಕಾಗಿದೆ.” ಎಂದು ಅವರು ಹೇಳಿದರು. ಗೀತಾ ನಾಗಭೂಷಣ ಅವರಿಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ ಅವುಗಳಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದ ಡಾಕ್ಟರೇಟ್,ಅತ್ತಿಮಬ್ಬೆ ಪ್ರಶಸ್ತಿ, 7ನಾಡೋಜ ಪ್ರಶಸ್ತಿ (ಮೊದಲ ಮಹಿಳಾ ಸಾಹಿತಿ) ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ - ೨೦೦೪ ('ಬದುಕು’ ಕಾದಂಬರಿಗೆ ಮತ್ತು ಕರ್ನಾಟಕದ ಮೊದಲ ಮಹಿಳಾ ಸಾಹಿತಿ) ಮಾಣಿಕ ಬಾಯಿ ಪಾಟೀಲ್ ಪ್ರತಿಷ್ಠಾನದ ಪ್ರಶಸ್ತಿ ('ಬದುಕು’ ಕಾದಂಬರಿಗೆ) ಅತ್ತಿಮಬ್ಬೆ ಸಾಹಿತ್ಯ ಪ್ರಶಸ್ತಿ ('ಬದುಕು’ ಕಾದಂಬರಿಗೆ) ಸರ್. ಎಂ. ವಿಶ್ವೇಶ್ವರಯ್ಯ ದಶಮಾನೋತ್ಸವ ಸಾಹಿತ್ಯ ಪ್ರಶಸ್ತಿ ('ಬದುಕು’ ಕಾದಂಬರಿಗೆ) ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ (ಸಮಗ್ರ ಕೃತಿಗಳಿಗಾಗಿ) ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಮಹಿಳಾ ಸಾಹಿತಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ (ಸಮಗ್ರ ಕೃತಿಗಳಿಗಾಗಿ) ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಬಿ. ಸರೋಜಾದೇವಿ ಸಾಹಿತ್ಯ ಪ್ರಶಸ್ತಿ ಬಸವರಾಜ ಕಟ್ಟೀಮನಿ ಕಾದಂಬರಿ ಪ್ರಶಸ್ತಿ ರಾಣಿ ಕಿತ್ತೂರು ಚೆನ್ನಮ್ಮ ಪ್ರಶಸ್ತಿ ಕರ್ನಾಟಕ ಲೇಖಕಿಯರ ಬಳಗ ನೀಡಿದ ಅನುಪಮಾ ಪ್ರಶಸ್ತಿ ಆರ್ಯಭಟ ಪ್ರಶಸ್ತಿ ಆಳ್ವಾಸ್ ನುಡಿಸಿರಿ ಪ್ರಶಸ್ತಿ ರತ್ನಮ್ಮ ಸಾಹಿತ್ಯ ಪ್ರಶಸ್ತಿ ಗೊರೂರು ಪ್ರಶಸ್ತಿ ಧರ್ಮಸ್ಥಳದ ಸಾಹಿತ್ಯ ಪ್ರಶಸ್ತಿ ಪ್ರೊ. ಆಲಗುರ ಪ್ರಶಸ್ತಿ ಉತ್ತಮ ಉಪನ್ಯಾಸಕಿ ಪ್ರಶಸ್ತಿ, ಗುಲ್ಬರ್ಗಾದ ಎಸ್. ಆರ್. ಪಾಟೀಲ್ ಮಹಾಂತ ಜ್ಯೋತಿ’ ಪ್ರತಿಷ್ಠಾನದ ಕಾಯಕ ರತ್ನ ಪ್ರಶಸ್ತಿ ಕನ್ನಡಸಾಹಿತ್ಯ ಪರಿಷತ್ತಿನ ಮಲ್ಲಿಕಾ ಮತ್ತು ರಾಜಾರಾಮ್ ದತ್ತಿ ಪ್ರಶಸ್ತಿಗಳು (`ಆಘಾತ’ ಮತ್ತು `ದಂಗೆ’ ಕಾದಂಬರಿಗಳಿಗೆ ಅನುಕ್ರಮವಾಗಿ) ಮಾರ್ದನಿ ಪತ್ರಿಕೆಯ ಉತ್ತಮ ಕಾದಂಬರಿ ಬಹುಮಾನ ('ನೋವು’ ಕಾದಂಬರಿಗೆ ) ಉಮಾಪತಿ ಚುಕ್ಕಿ ಪ್ರತಿಷ್ಠಾನ ಸಿರವಾರದ ಪ್ರಶಸ್ತಿ ('ಧುಮ್ಮಸು’ ಕಾದಂಬರಿಗೆ) ಭಾರತೀಯ ಭಾಷಾ ಪರಿಷದ್ ಕೋಲ್ಕತ್ತಾದ 'ರಚನಾ ಸಮಗ್ರ ಪ್ರಶಸ್ತಿ' ಡಾ.ಗೀತಾ ನಾಗಭೂಷಣರು ಗದಗದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ೨೦೧೨ರಲ್ಲಿ ಗೀತಾ ನಾಗಭೂಷಣರು ಕನ್ನಡಕ್ಕೆ ಮೊಟ್ಟಮೊದಲ ಭಾರತೀಯ ಭಾಷಾ ಪರಿಷತ್ ಪ್ರಶಸ್ತಿ ತಂದುಕೊಟ್ಟಿದ್ದಾರೆ ಆದರೆ ದುರಾದೃಷ್ಟ ಅವರು ಕಲಬುರಗಿಯಲ್ಲಿ, ಜೂನ್ ೨೮, ೨೦೨೦ರಂದು ತಮ್ಮ ೭೮ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾದರು ಎನ್ನುವುದು ಕಲ್ಯಾಣ ಕರ್ನಾಟಕ ಸಾಹಿತ್ಯ ವಲಯಕ್ಕೆ ತುಂಬಲಾರದ ನಷ್ಟವಾಗಿದೆ. ಕಲ್ಯಾಣ ಸಿರಿಗನ್ನಡ ಸಾಹಿತ್ಯ ಅಂತಜಾ೯ಲ ತಾಣಕ್ಕೆ ಬೇಟಿಕೊಡಿ

ಪಂಚಾಕ್ಷರಿ ಪುಣ್ಯಶೆಟ್ಟಿ

ಹಿರಿಯ ಸಾಹಿತಿಯಾದ ಪಂಚಾಕ್ಷರಿ ಪುಣ್ಯಶೆಟ್ಟಿಯವರು ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಐನೋಳ್ಳಿ ಗ್ರಾಮದ ಶಿವರುದ್ರಪ್ಪ ಮತ್ತು ನೀಲಮ್ಮ ದಂಪತಿಗಳಿಗೆ ದಿನಾಂಕ ೩-೨-೧೯೩೫ರಲ್ಲಿ ಜನಿಸಿದ್ದಾರೆ. ೮ನೇ ತರಗತಿಯವರೆಗೆ ಉರ್ದು ಮಾಧ್ಯಮದಲ್ಲಿ ಅಧ್ಯಯನ ಮಾಡಿ ನಂತರ ಕನ್ನಡ ಮಾಧ್ಯಮದಲ್ಲಿ ಎಚ್.ಎಸ್.ಸಿ. ಟಿ.ಸಿ.ಎಚ್. ಸಿ.ಪಿ.ಎಡ್. ಬಿ.ಪಿ.ಎಡ್. ಶಿಕ್ಷಣ ಪಡೆದು ೧೯೫೩ರಲ್ಲಿ ಹುಮನಾಬಾದ ತಾಲೂಕಿನ ದುಮ್ಮನಸೂರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರಾಗಿ, ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ, ೧೯೯೩ರಲ್ಲಿ ನಿವೃತ್ತರಾಗಿದ್ದಾರೆ. ಬಾಲ್ಯದಿಂದಲೂ ಸಾಹಿತ್ಯದಲ್ಲಿ ತುಂಬ ಆಸಕ್ತರಾದ ಇವರು ೧೯೬೩ರಲ್ಲಿ `ಅಜಾದ್ ಚಂದ್ರಶೇಖರ’ (ನಾಟಕ) `ಶಿವಶರಣ ರೇವಪ್ಪಯ್ಯನವರು' `ಸಮಾಜವಾದಿ ಹೋರಾಟಗಾರ ವೈಜಿನಾಥ ಪಾಟೀಲ್'. `ಮಹಾಯೋಗಿಣಿ ಚಕ್ರಕೋಟೆ ಬಾಯವ್ವ' `ಡಾ.ಚನ್ನಬಸವ ಪಟ್ಟದ್ದೆವರ ಹೋರಾಟದ ಬದುಕು' `ಮಹಾದೇವಪ್ಪಾ ಮಿಸೆ' `ಹುತಾತ್ಮ ಬಸವರಾಜ ಹುಡಗಿ'. `ಬಿಜಪಾಲ್ ಸಿಂಗ ಸ್ವತಂತ್ರ ಹೋರಾಟಗಾರ' `ಬಿ.ಟಿ.ಸಾಸನೂರ' `ವಿರೂಪಾಕ್ಷಯ್ಯಾ ಸ್ವಾಮಿ ಐನ್ನೋಳ್ಳಿ’ `ಹುಟ್ಟು ಹೋರಾಟಗಾರ ಪಿ.ಎನ್.ಪಾಟೀಲ್'. (ಚರಿತ್ರೆಗಳು) `ಸಜ್ಜನರ ಸಂಘದಲ್ಲಿ' (ವ್ಯಕ್ತಿ ಚಿತ್ರಣ) `ಬೀದರದಿಂದ ಸಿಂಗಾಪುರಕ್ಕೆ' `ಕಲ್ಯಾಣದಿಂದ ಕಾಶ್ಮೀರಕ್ಕೆ’ (ಪ್ರವಾಸ ಕಥನಗಳು) ಎಂಬ ಕೃತಿಗಳು ಪ್ರಕಟಿಸಿದ್ದಾರೆ. ಇವರು ಚಿಂಚೋಳಿ ತಾಲೂಕಿನ ಪ್ರಥಮ ಕಸಾಪ ಅಧ್ಯಕ್ಷರಾಗಿ, ಎರಡು ಅವಧಿಗೆ ಬೀದರ ಜಿಲ್ಲಾ ಕಸಾಪ ಅಧ್ಯಕ್ಷರಾಗಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇವರಿಗೆ ಭಾಲ್ಕಿ ಮಠದಿಂದ ಉತ್ತಮ ಲೇಖಕ ಪ್ರಶಸ್ತಿ, ಹಾರಕೂಡ ಹಿರೇಮಠ ಸಂಸ್ಥಾನದಿAದ ಚನ್ನಶ್ರೀ ಪ್ರಶಸ್ತಿ, ಬಸವಕಲ್ಯಾಣ ಅನುಭವ ಮಂಟಪದಿAದ ಜಯದೇವಿ ತಾಯಿ ಲಿಗಾಡೆಯವರ ಸ್ಮರಣಾರ್ಥ ರಾಷ್ಟ್ರೀಯ ಪುರಸ್ಕಾರ, ಸೇರಿದಂತೆ ಮೊದಲಾದ ಪ್ರಶಸ್ತಿ ಪುರಸ್ಕಾರಗಳು ಪಡೆದಿದ್ದಾರೆ. ಇವರ ಕವನ, ಲೇಖನ, ಬರಹಗಳು ಭಾಲ್ಕಿಯ ಶಾಂತಿ ಕಿರಣ ದ್ವೆöÊಮಾಸಿಕ ಹಾಗೂ ಉತ್ತರ ಕರ್ನಾಟಕ ದಿನಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಸದ್ಯ ಇವರು ಬೀದರದ ಖಾಯಂ ನಿವಾಸಿಯಾಗಿ ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದಾರೆ.

ಡಾ. ನಿಜಲಿಂಗ ಆರ್ ರಗಟೆ

ಸಾಹಿತಿ ನಿಜಲಿಂಗ ಆರ್.ರಗಟೆ ಯವರು ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚುಮ್ಮನಚೋಡ ಗ್ರಾಮದ ರಾಜಗುರು ಮತ್ತು ಇರಮ್ಮಾ ದಂಪತಿಗಳಿಗೆ ದಿನಾಂಕ ೪-೧೧-೧೯೭೮ರಲ್ಲಿ ಜನಿಸಿದ್ದಾರೆ. ಎಂ.ಬಿ.ಎ.ಮತ್ತು ಡಿ.ಸಿ.ಎ.ಪದವಿ ಪಡೆದ ಇವರು ಭಾಲ್ಕಿಯ ಡಿ.ಸಿ.ಸಿ ಬ್ಯಾಂಕ್ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು `ಕನ್ನಡ ಒಡಲು', `ಕನ್ನಡ ಕಣಜ', `ನನ್ನ ಕವನ' (ಕವನ ಸಂಕಲನಗಳು) `ಕಥಾಗುಚ್ಚ' (ಕಥಾ ಸಂಕಲನ) `ಸಿರಿವಂತನ ದರ್ಪ' (ನಾಟಕ) ಎಂಬ ಕೃತಿಗಳು ಪ್ರಕಟಿಸಿದ್ದಾರೆ. ಇವರ ಬರಹಗಳು ಸಂಯುಕ್ತ ಕರ್ನಾಟಕ, ಬೀದರ ರಹಸ್ಯ, ಮೊದಲಾದ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಇವರು ೨೦೦೧ರಿಂದ ೨೦೦೫ರವರೆಗೆ ಚಿಂಚೋಳಿ ತಾಲೂಕಿನ ಚಿಮ್ಮನಚೋಡ್ ವಲಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇವರಿಗೆ ಸಾಹಿತ್ಯ ಸಿಂಚನ ಬೆಂಗಳೂರು ಮತ್ತು ಬಿಜಾಪುರ ಲೇಖಕರ ಬಳಗದಿಂದ ರಾಜ್ಯ ಮಟ್ಟದ ಪ್ರಶಸ್ತಿ, ಶಹಾಪೂರ ಸಾಗರದ ಕಲಾನಿಕೇತನ ಟ್ರಸ್ಟ್ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿ, ಕಾಸರಗೋಡಿನ ರಾಜ್ಯಮಟ್ಟದ ಕವಿ ಸಮ್ಮೇಳನದಲ್ಲಿ ಕವಿರತ್ನ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಪಡೆದಿದ್ದಾರೆ. ಅಷ್ಟೇಯಲ್ಲದೆ ಇವರಿಗೆ ನ್ಯಾಷನಲ್ ವರ್ಚುಲ್ ಯೂನಿವರ್ಸಿಟಿಯಿಂದ ಗೌರವ ಡಾಕ್ಟರೇಟ್ ಪದವಿಯು ನೀಡಿ ಗೌರವಿಸಲಾಗಿದೆ. ಹಾಗೂ ನೈಜದೀಪ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಬೀದರ ಹಾಗೂ ಚಿಂಚೋಳಿ ತಾಲೂಕಿನ ಚಿಮ್ಮನಚೋಡದಲ್ಲಿ ಕೆಲವು ಕಾರ್ಯಕ್ರಮಗಳು ಮಾಡಿ ಸಾಹಿತಿ, ಕಲಾವಿದರಿಗೆ ಪ್ರಶಸ್ತಿ ಪುರಸ್ಕಾರಗಳು ನೀಡಿ ಪ್ರೊತ್ಸಾಹಿಸುತ್ತಿದ್ದಾರೆ. ಇವರಿಗೆ ೨೦೨೧ ಜನೆವರಿ ೨೧ ರಂದು ಬೀದರ ತಾಲೂಕಾ ೨ನೇ ತಾಲೂಕಾ ಯುವ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗೌರವಿಸಲಾಗಿದೆ. ಸದ್ಯ ಇವರು ಬೀದರನಲ್ಲಿ ನೆಲೆಸಿದ್ದಾರೆ.

ಡಾ. ರಾಮಚಂದ್ರ ಗಣಾಪೂರ

ಸಾಹಿತಿ ಡಾ.ರಾಮಚಂದ್ರ ಗಣಾಪೂರ. ರವರು ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಸುಲೆಪೇಟ್ ಗ್ರಾಮದ ಭೀಮಣ್ಣ ಮತ್ತು ಈರಮ್ಮ ದಂಪತಿಗಳಿಗೆ ದಿನಾಂಕ ೧೫-೦೨-೧೯೭೫ರಲ್ಲಿ ತನ್ನ ತಾಯಿ ತವರುಮನೆ ಹುಮನಾಬಾದ ತಾಲೂಕಿನ ಹುಡಗಿ ಗ್ರಾಮದಲ್ಲಿ ಜನಿಸಿದ್ದಾರೆ. ಎಂ.ಎ. ಎಂ. ಫೀüಲ್., ಪಿ.ಹೆಚ್.ಡಿ. ಪದವಿಧರರಾದ ಇವರು ಬೀದರದ ಜ್ಞಾನಕಾರಂಜಿ ಹಾಲಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ಎಂಟು ವರುಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಸಾಹಿತ್ಯದಲ್ಲಿ ತುಂಬ ಆಸಕ್ತರಾದ ಇವರು `ನಿಮ್ಮೊಡನಿದ್ದೂ ನಿಮ್ಮಂತಾಗದೆ', `ತನುವೆಂಬ ಮನೆಯೊಳಗೆ,' `ಸಾಹಿತ್ಯ ಸಮೀಕ್ಷೆ,' `ಶಿಷ್ಯನೆಂಬಾ ವನಕ್ಕೆ', `ನಿತ್ಯೋತ್ಸವದ ಕವಿ ನಿಸಾರ್ ಅಹಮದ್', `ನಾಗಾರ್ಜುನ ಕಾಳಗ', `ಗುಲಬರ್ಗಾ ಜಿಲ್ಲೆಯ ಆಧುನಿಕ ವಚನ ಸಾಹಿತ್ಯ', `ಸುವರ್ಣ ದಾಂಪತ್ಯ', `ಕ್ವಾಟಿ ಜಾನಪದ', `ಸೌಮ್ಯ ಸಿರಿ.’ ಇತ್ಯಾದಿ ೧೪ ಕೃತಿಗಳು ಪ್ರಕಟಿಸಿದ್ದಾರೆ. ಇವರ ಬರಹಗಳು ಕಲಬುರಗಿ ಹಾಗೂ ರಾಯಚೂರು ಆಕಾಶವಾಣಿಯಿಂದ ಅನೇಕ ಕಾರ್ಯಕ್ರಮಗಳು ಬಿತ್ತರಗೊಂಡಿವೆ. ಮತ್ತು ರಾಷ್ಟಿçÃಯ ಅಂತರರಾಷ್ಟ್ರೀಯ ವಿಚಾರ ಸಂಕಿರಣಗಳು ಸೇರಿದಂತೆ ಹಲವಾರು ರಾಜ್ಯ ಮಟ್ಟದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಇವರಿಗೆ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ದೆಹಲಿಯ ವತಿಯಿಂದ ಡಾ. ಅಂಬೇಡ್ಕರ್ ಫೆಲೋಶಿಪ್ ಪ್ರಶಸ್ತಿ, ಕವಿ ಸೂರ್ಯ ಪ್ರಶಸ್ತಿ, ಕಲ್ಯಾಣ ಚನ್ನಶ್ರೀ ಪ್ರಶಸ್ತಿ, ಸೇರಿದಂತೆ ಮೊದಲಾದ ಪ್ರಶಸ್ತಿ ಪುರಸ್ಕಾರಗಳು ಪಡೆದಿದ್ದಾರೆ. ಮತ್ತು `ಸ್ನೇಹಗಂಗಾ' ಮಾಸಪತ್ರಿಕೆಯ ಸಂಪಾದಕರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ.

ಡಾ.ಚಿತ್ರಶೇಖರ ಚಿರಳ್ಳಿ

ಡಾ.ಚಿತ್ರಶೇಖರ ಚಿರಳ್ಳಿ ಯವರು ಕಲಬುರಗಿ ಜಿಲ್ಲೆ ಚಿತ್ತಾಪೂರ ತಾಲೂಕಿನ ರಾಜಾಪೂರ ಗ್ರಾಮದ ಸಿದ್ರಾಮಪ್ಪಾ ಮತ್ತು ಸುಂದ್ರಮ್ಮ ದಂಪತಿಗಳಿಗೆ ದಿನಾಂಕ ೧-೭-೧೯೭೨ರಲ್ಲಿ ಜನಿಸಿದ್ದಾರೆ. ಎಂ.ಎ. ಎಂ.ಫೀಲ್. ಪಿ.ಎಚ್.ಡಿ ಪದವಿಧರರಾದ ಇವರು ೧೯೯೯ರಲ್ಲಿ ಕಲಬುರಗಿ ಆಕಾಶವಾಣಿಯಲ್ಲಿ ಉದ್ಘೋಷಕರಾಗಿ ೨೦೦೧ರಿಂದ ಸೇವೆಗೆ ಸೇರಿ ಎರಡು ವರ್ಷ ಕಾರ್ಯನಿರ್ವಹಿಸಿದ್ದಾರೆ. ಮತ್ತು ಬಾನುಲಿಯಿಂದ ಹಾಸ್ಯ-ಲಾಸ್ಯ, ಮಹಿಳಾ ಕಾರ್ಯಕ್ರಮ, ಸಂದರ್ಶನಗಳು ನಡೆಸಿ ಕೇಳುಗರ ಮನೆ ಮಾತಾಗಿದ್ದರು. ನಂತರ ೨೦೦೧ರಿಂದ ೨೦೦೯ ರವರೆಗೆ ಬಸವಕಲ್ಯಾಣದ ಖಾಸಗಿ ಪದವಿ ಕಾಲೇಜಿನಲ್ಲಿ ಸೇವೆ ಸಲ್ಲಿಸಿದ ನಂತರ ೨೦೦೯ರಿಂದ ಬಸವಕಲ್ಯಾಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರದ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಲ್ಯದಿಂದಲೂ ಸಾಹಿತ್ಯ ಕ್ಷೇತ್ರದಲ್ಲಿ ತುಂಬ ಆಸಕ್ತರಾಗಿದ್ದ ಇವರು ಕತೆ, ಕವನ, ಲೇಖನ, ಆಧುನಿಕ ವಚನ ಸೇರಿದಂತೆ ಮೊದಲಾದ ಬರಹಗಳು ಬರೆದಿದ್ದಾರೆ. ಮತ್ತು `ಬಸವೇಶ್ವರ ಮತ್ತು ಅಸ್ಪೃಶ್ಯತೆ ನಿರ್ಮೂಲನೆ' ಎಂಬ ಕೃತಿಯು ರಚಿಸಿದ್ದಾರೆ. ಇವರ ಬರಹಗಳು ಪ್ರಜಾವಾಣಿ, ವಿಜಯ ಕರ್ನಾಟಕ, ಕರ್ಮವೀರ ಇತ್ಯಾದಿ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಮತ್ತು ಆಕಾಶವಾಣಿ ದೂರದರ್ಶನಗಳಲ್ಲಿಯು ಪ್ರಕಟ, ಪ್ರಸಾರವಾಗಿವೆ. ಇವರು ಬಸವಕಲ್ಯಾಣ ತಾಲೂಕಿನ ವಚನ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ, ಕರ್ನಾಟಕ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಮಲ್ಲಿನಾಥ ಚಿಂಚೋಳಿ

ಸಾಹಿತಿ ಮಲ್ಲಿನಾಥ ಚಿಂಚೋಳಿ ರವರು ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚನ್ನೂರು ಗ್ರಾಮದ ಹಣಮಂತರಾವ ಮತ್ತು ಬಸಮ್ಮಾ ದಂಪತಿಗಳಿಗೆ ದಿನಾಂಕ ೨೫-೯-೧೯೭೦ರಲ್ಲಿ ಜನಿಸಿದ್ದಾರೆ. ಎಂ.ಎ.ಬಿ,ಇಡಿ. ಪದವಿಧರರಾದ ಇವರು ೧೯೯೫ರಿಂದ ಹುಮನಾಬಾದಿನ ರಾಮ ಮತ್ತು ರಾಜ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಆಂಗ್ಲ ಭಾಷಾ ಉಪನ್ಯಾಸಕರಾಗಿ, ಪ್ರಾಚಾರ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ೧೯೮೬ರಲ್ಲಿ ವಿದ್ಯಾರ್ಥಿ ಜೀವನದಲ್ಲಿಯೇ ಸಾಹಿತ್ಯ ರಚನೆಯ ಗೀಳು ಬೆಳೆಸಿಕೊಂಡ ಇವರು `ಚಂದ್ರ ಚನ್ನೂರು' ಎಂಬ ಕಾವ್ಯನಾಮದಲ್ಲಿ ಪತ್ರಿಕೆಗಳಲ್ಲಿ ಕವಿತೆಗಳು ಪ್ರಕಟಿಸಿ ಓದುಗರಿಂದ ಮೆಚ್ಚುಗೆಯು ಗಳಿಸಿದ್ದಾರೆ. ಆದರೆ ಬಹಳ ವರ್ಷಗಳಿಂದ ಪುಸ್ತಕ ಪ್ರಕಟಿಸದೆ ಉಳಿದ ಇವರು ೨೦೧೮ರಲ್ಲಿ `ಮುಂಜಾವಿನ ಮಲ್ಲಿಗೆ' ಎಂಬ ಕವನ ಸಂಕಲನ ಪ್ರಕಟಿಸಿದ್ದಾರೆ. ಇವರ ಕತೆ, ಕವನ, ಲೇಖನಗಳು ಸಂಯುಕ್ತ ಕರ್ನಾಟಕ, ಕರ್ಮವೀರ, ಮಯೂರ, ಗ್ರೀನೊಬಲ್ಸ್, ಕನ್ನಡ ನಾಡು, ಕೆಸರಿ ಘರ್ಜನೆ, ಸತ್ಯಕಾಮ ಮೊದಲಾದವುಗಳಲ್ಲಿ ಹಾಗೂ ಕೆಲ ಪ್ರಾತಿನಿಧಿಕ ಸಂಕಲನಗಳಲ್ಲಿ ಪ್ರಕಟವಾಗಿವೆ. ಇವರು ರಾಜ್ಯ ಮಟ್ಟದ ಕಮ್ಮಟಗಳಲ್ಲಿ ಪಾಲ್ಗೊಂಡು ಅನೇಕ ಉಪನ್ಯಾಸವು ನೀಡಿದ್ದಾರೆ. ಸದ್ಯ ಇವರು ಹುಮನಾಬಾದಿನ ನಿವಾಸಿಯಾಗಿದ್ದು, ತಮ್ಮ ವೃತ್ತಿ ಬದುಕಿನೊಂದಿಗೆ ಸಾಹಿತ್ಯದಲ್ಲಿ ತೊಡಗಿಸಿಕೊಂಡು ಸುಮಾರು ಇಲ್ಲಿಯವರೆಗೆ ೧೦೦೦ಕ್ಕಿಂತ ಹೆಚ್ಚು ಕವನಗಳು, ೧೫. ಕತೆಗಳು, ಹಲವಾರು ಲೇಖನ, ಬಿಡಿ ಬರಹಗಳು ಬರೆದಿದ್ದಾರೆ.

ಕರುಣಾ ಸಲಗರ

`ಶಿವಲಿಂಗೇಶ್ವರ' ಎಂಬ ಅಂಕಿತನಾಮದಿAದ ಆಧುನಿಕ ವಚನಗಳನ್ನು ಬರೆದು ಪುಸ್ತಕ ಪ್ರಕಟಿಸಿದ ಲೇಖಕಿಯೆಂದರೆ ಕರುಣಾ ಸಲಗರ. ಇವರು ಕಲಬುರಗಿ ಜಿಲ್ಲೆ ಕುರಿಕೋಟಾ ಗ್ರಾಮದ ಚನ್ನಬಸಪ್ಪ ಮತ್ತು ಹಿರಾಬಾಯಿ ದಂಪತಿಗಳಿಗೆ ದಿನಾಂಕ ೧-೬-೧೯೬೬ರಲ್ಲಿ ಜನಿಸಿದ್ದಾರೆ. ಟಿ.ಸಿ.ಎಚ್. ಶಿಕ್ಷಣ ಪಡೆದ ಇವರು ೧೯೮೯ರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ ಸೇವೆಗೆ ಸೇರಿ ಸದ್ಯ ಹುಮನಾಬಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಗುರುಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಮ್ಮ ಶಿಕ್ಷಕ ವೃತ್ತಿಯೊಂದಿಗೆ ಸಾಹಿತ್ಯದ ಗೀಳು ಬೆಳೆಸಿಕೊಂಡ ಇವರು `ಶಿವಲಿಂಗೇಶ್ವರ ವಚನಗಳು' (ಆಧುನಿಕ ವಚನ) `ಭಾವಧಾರೆ'. `ಕಾವ್ಯ ಕಿರಣ' (ಕವನ ಸಂಕಲನಳು) ಎಂಬ ಕೃತಿಗಳು ಪ್ರಕಟಿಸಿದ್ದಾರೆ. ಇವರಿಗೆ ಚಿತ್ರದುರ್ಗದ ಮುರುಘಾ ಮಠದ ಶ್ರೀಗಳಿಂದ ಆದರ್ಶ ಶರಣ ಜೀವಿ ಪ್ರಶಸ್ತಿ, ದೇಶಪಾಂಡೆ ಪ್ರತಿಷ್ಠಾನದ ಕಾವ್ಯಾಂಜಲಿ ಪ್ರಶಸ್ತಿ, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ನೌಕರರ ಸಂಘದ ಕಾಯಕ ಪ್ರಶಸ್ತಿ, ಕರ್ನಾಟಕ ಜಾನಪದ ಪರಿಷತ್, ದಲಿತ ಸಾಹಿತ್ಯ ಪರಿಷತ್ ಹಾಗೂ ಧರಿನಾಡು ಕನ್ನಡ ಸಂಘ, ಹುಮನಾಬಾದ್ ವತಿಯಿಂದ `ಕನ್ನಡ ಸೇವಾ ರತ್ನ ಪ್ರಶಸ್ತಿ, ಕರ್ನಾಟಕ ಜಾನಪದ ಪರಿಷತ್ ಮತ್ತು ದಾಸ ಸಾಹಿತ್ಯ ಪರಿಷತ್ ವತಿಯಿಂದ `ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಿದ್ದಾರೆ. ಮತ್ತು ಹುಮನಾಬಾದನಲ್ಲಿ ೨೦೧೭ರಲ್ಲಿ ನಡೆದ ಪ್ರಥಮ ತಾಲೂಕು ಮಹಿಳಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಿ ಗೌರವಿಸಲಾಗಿದೆ. ಇವರ ಬರಹಗಳು ಕೆಲ ಪತ್ರಿಕೆ ಹಾಗೂ ಆಕಾಶವಾಣಿ ಬಸವ ಟಿ.ವಿ.ಯಲ್ಲಿ ಪ್ರಕಟ ಪ್ರಸಾರವಾಗಿವೆ. ಇವರು ಬಸವ ಸೇವಾ ಪ್ರತಿಷ್ಠಾನದ ಸದಸ್ಯರಾಗಿ ಸಾಹಿತ್ಯ ಕೃಷಿ ಮುಂದುವರೆಸಿದ್ದು ಸದ್ಯ ಹುಮನಾಬಾದನಲ್ಲಿ ವಾಸವಾಗಿದ್ದಾರೆ.

ಭಾನುದಾಸ ಪಾಟೀಲ್

ಸಾಹಿತಿ ಭಾನುದಾಸ ಪಾಟೀಲ್ ರವರು ಕಲಬುರಗಿ ಜಿಲ್ಲೆ ನೂತನ ಕಮಲಾಪೂರ ತಾಲೂಕಿನ ಮಡಕಿ ಗ್ರಾಮದ ಉದ್ದವರಾವ ಪಾಟೀಲ್ ಮತ್ತು ವತ್ಸಲಾಬಾಯಿ ದಂಪತಿಗಳಿಗೆ ದಿನಾಂಕ ೧-೬-೧೯೬೧ರಲ್ಲಿ ಜನಿಸಿದ್ದಾರೆ. ಬಿ.ಎ.ಪದವಿಧರರಾದ ಇವರು ಪಿಯುಸಿ, ಟಿ.ಸಿ.ಎಚ್ ಶಿಕ್ಷಣ ಪಡೆದು ೧೯೮೩ರಿಂದ ಬಸವಕಲ್ಯಾಣದ ಅನುದಾನಿತ ಜಿಜಾಮಾತಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮತ್ತು ತಮ್ಮ ವೃತ್ತಿ ಬದುಕಿನೊಂದಿಗೆ ಸಾಹಿತ್ಯದಲ್ಲಿಯು ತುಂಬ ಆಸಕ್ತರಾಗಿ ೨೦೦೪ರಲ್ಲಿ ಹತ್ತು ಜನ ಲೇಖಕರೊಂದಿಗೆ `ಹತ್ತು ಮುಖಗಳ ನೂರು ಭಾವಗಳು' ಎಂಬ ಕವನ ಸಂಕಲನದಲ್ಲಿ ತಮ್ಮ ಹತ್ತು ಕವನಗಳು ಪ್ರಕಟಿಸಿದ್ದಾರೆ. ಮತ್ತು ಇತ್ತೀಚೆಗೆ `ನಮ್ಮೂರ' ಎಂಬ ಗ್ರಾಮ ಚರಿತ್ರೆಯು ಬರೆದಿದ್ದಾರೆ. ಇವರ ಬರಹಗಳು ಕೆಲ ಪ್ರಮುಖ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನ ಮತ್ತು ಅಭಿನಂದನಾ ಗ್ರಂಥಗಳಲ್ಲಿ ಪ್ರಕಟವಾಗಿವೆ. ಇವರಿಗೆ ೧೯೯೨ರಲ್ಲಿ ಬಸವಕಲ್ಯಾಣ ತಾಲೂಕು ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿ,ಯು ನೀಡಿ ಗೌರವಿಸಲಾಗಿದೆ. ಮತ್ತು ಹಾರಕೂಡದ ೭ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ, ಮುಚಳಂಬ, ಹುಲಸೂರು, ಬೆಲೂರು ಮಠಗಳಲ್ಲಿ ನಡೆದ ವಿವಿಧ ಸಾಹಿತ್ಯ ಸಮ್ಮೇಳನಗಳಲ್ಲಿ ಭಾಗವಹಿಸಿ ಕವನ ವಾಚನ ಮಾಡಿರುವುದರಿಂದ ಸನ್ಮಾನಿಸಿ ಗೌರವಿಸಿದ್ದಾರೆ. ಸದ್ಯ ಇವರು ನಿವೃತ್ತಿಯ ಅಂಚಿನಲ್ಲಿದ್ದು ಬಸವಕಲ್ಯಾಣದ ಖಾಯಂ ನಿವಾಸಿಯಾಗಿ ಸಾಹಿತ್ಯ ಕೃಷಿಯನ್ನು ಮುಂದುವರೆಸಿದ್ದಾರೆ.

ವೀರಣ್ಣ ಕುಂಬಾರ

ಸಾಹಿತಿ ವೀರಣ್ಣ ಕುಂಬಾರ ರವರು ಕಲಬುರಗಿ ಜಿಲ್ಲೆ ಶಹಾಬಾದ ತಾಲ್ಲೂಕಿನ ಭಂಕೂರು ಗ್ರಾಮದ ಬಸಣ್ಣ ಮತ್ತು ಬಸಮ್ಮ ದಂಪತಿಗಳಿಗೆ ದಿನಾಂಕ ೨೫-೨-೧೯೫೪ರಲ್ಲಿ ಜನಿಸಿದ್ದಾರೆ. ಡಿಪ್ಲೊಮಾ ಇನ್ ಇಂಜಿನಿಯರಿAಗ್ ಪದವೀಧರರಾದ ಇವರು ಕೆಲವರ್ಷ ಶಹಾಬಾದಿನ ಎ.ಬಿ.ಎಲ್. ಸಿಮೆಂಟ್ ಕಾರ್ಖಾನೆಯಲ್ಲಿ ಇಂಜಿನಿಯರಿAಗ್ ಸೇವೆ ಸಲ್ಲಿಸಿ ೧೯೯೮ರಲ್ಲಿ ಸ್ವಯಂ ನಿವೃತ್ತಿ ಹೊಂದಿದ್ದಾರೆ. ಸೋಲಾರ್ ಎನರ್ಜಿ ಪ್ರೊಜೆಕ್ಟ್ ನಿಮಿತ್ತವಾಗಿ ಬೀದರಿಗೆ ಆಗಮಿಸಿದ ಇವರು ಇಲ್ಲಿಯ ಕಲೆ ಸಾಹಿತ್ಯ ಬಸವ ಸಂಸ್ಕೃತಿ ಮೈಗೂಡಿಸಿಕೊಂಡು, `ಶರಣ ಕುಂಬಾರ ಗುಂಡಯ್ಯ, ಗುರುಪಾದ ಗಂಗೆ, ಶೀವರೇಖಾ, ಚೆನ್ನಯ್ಯನ ಮಗ ನಾನಯ್ಯ, ಸಾತ್ವಿಕ,' ಎಂಬ ಕೃತಿಗಳು ಪ್ರಕಟಿಸಿದ್ದಾರೆ. ಭಾಲ್ಕಿಯ ಶಾಂತಿ ಕಿರಣ (ದ್ವೈಮಾಸಿಕ) ಜ್ಯೋತಿ ಮುಟ್ಟಿದ ಬುತ್ತಿ, ಬಸವ ಬಳ್ಳಿ, ಇವು ಇವರ ಸಹ ಸಂಪಾದಕತ್ವದಲ್ಲಿ ಪ್ರಕಟಿಸಿದ್ದಾರೆ. ಹಾಗೂ `ಹಿರೇಮಠ ಸಂಸ್ಥಾನ ಒಂದು ಅಧ್ಯಯನ, ಬೀದರ ಜಿಲ್ಲೆಯ ತಾಡೋಲೆ ಮತ್ತು ಹಸ್ತಪ್ರತಿ ಸಂಗ್ರಹ, ಬೀದರ ಜಿಲ್ಲೆಯ ತತ್ವ ಪದಕಾರರ ತತ್ವ ಪದಗಳು,’ ಎಂಬ ಕೃತಿಗಳು ಸಂಪಾದಿಸಿ ನೂರಾರು ಶರಣರ ವಚನಗಳಿಗೆ ವ್ಯಾಖ್ಯಾನಗಳು ಬರೆದಿದ್ದಾರೆ. ಸದ್ಯ ಇವರು ಭಾಲ್ಕಿಯ ನಿವಾಸಿಯಾಗಿದ್ದಾರೆ.

ಮಾನಶೆಟ್ಟಿ ಬೆಳಕೇರಿ

ಹಿರಿಯ ಮಕ್ಕಳ ಸಾಹಿತಿ ಮಾನಶೆಟ್ಟಿ ಬೆಳಕೇರಿ ರವರು ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾ ಇದಲಾಯಿ ಎಂಬ ಗ್ರಾಮದ ಸಿದ್ದಪ್ಪ ಮತ್ತು ಭೋಗಮ್ಮ ದಂಪತಿಗಳಿಗೆ ದಿನಾಂಕ ೧೨-೨-೧೯೪೯ರಲ್ಲಿ ಜನಿಸಿದ್ದಾರೆ. ಎಂ.ಎ.ಎಂ.ಎಡ್ ಪದವಿಧರರಾದ ಇವರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಕನ್ನಡ ಸಾಹಿತ್ಯದಲ್ಲಿ ಆಸಕ್ತರಾಗಿ ೧೯೬೫ರಲ್ಲಿ `ಹೂಗೊಂಚಲು' ಮತ್ತು ೧೯೮೪ರಲ್ಲಿ `ಮತ್ತೆ ಬಂತು ವಸಂತ' (ಮಕ್ಕಳ ಕವನ ಸಂಕಲನಗಳು) ೨೦೧೫ರಲ್ಲಿ `ಕರ್ನಾಟಕ ವಿಮೋಚನೆ' (ಲೇಖನ ) ೨೦೧೬ರಲ್ಲಿ `ಬೆಳಕೇ ರಿ' (ಚುಟುಕುಗಳ ಸಂಕಲನ) ೨೦೧೭ರಲ್ಲಿ `ಕಲ್ಯಾಣ ಕರ್ನಾಟಕ ಸಮಗ್ರ ಇತಿಹಾಸ' ಮತ್ತು `ಕನ್ನಡ ಕುಲಗುರು ಬಸಪ್ಪ ಕರಕಾಳೆ' ಹಾಗೂ ೨೦೧೯ರಲ್ಲಿ 'ಹನುಮಾಯಣ' ಎಂಬ ಕೃತಿಗಳು ಪ್ರಕಟಿಸಿದ್ದಾರೆ. ಇವರು ಕಾವ್ಯ, ಪದ್ಯ, ಕಥನ ಕವನ, ಅಕರಾದಿ ಪಂದ್ಯ, ವಿಡಂಬನೆ, ಹಾಸ್ಯ, ಮೊದಲಾದ ಸೃಜನಶೀಲ ಬರಹಗಳನ್ನು ಬರೆದಿದ್ದಾರೆ. ಅವು ನಾಡಿನಾದ್ಯಂತ ಹಲವಾರು ಪತ್ರಿಕೆಗಳಲ್ಲಿ ಹಾಗೂ ಆಕಾಶವಾಣಿ ದೂರದರ್ಶನಗಳಲ್ಲಿಯೂ ಪ್ರಕಟ,ಪ್ರಸಾರವಾಗಿವೆ. ಮತ್ತು ಇವರು ನಟ ಅನಂತನಾಗ ನಟಿಸಿದ `ಬರ' ಚಲನ ಚಿತ್ರದಲ್ಲಿ ನಟಿಸಿ ಕಲಾವಿದರಾಗಿಯು ಗುರ್ತಿಸಿಕೊಂಡಿದ್ದಾರೆ. ಆದ್ದರಿಂದ ಇವರ ಕಲೆ, ಸಾಹಿತ್ಯ, ಶೈಕ್ಷಣಿಕ ಸಾಧನೆಗೆ ೧೯೮೪ರಲ್ಲಿ ಕಲಬುರಗಿಯಿಂದ `ಯುವ ಮಕ್ಕಳ ಸಾಹಿತಿ' ಎಂಬ ಪ್ರಶಸ್ತಿ, ೨೦೦೬ರಲ್ಲಿ ಡಾ.ಅಬ್ದುಲ್ ಕಲಾಮ್ ವಿಜನ್ ವತಿಯಿಂದ ಕನ್ನಡ ರತ್ನ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಪಡೆದಿದ್ದಾರೆ. ಮತ್ತು ೨೦೦೬ರಲ್ಲಿ ಬೀದರನಲ್ಲಿ ನಡೆದ ೭೨ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಕ್ಕಳ ಕವನವು ವಾಚನ ಮಾಡಿದರು. .

ಲಿಂ.ಪೂಜ್ಯ. ಶ್ರೀ. ಸಿ.ಜಿ.ಸ್ವಾಮಿಗಳು

ಜ್ಯೋತಿಷಿ, ಕವಿ, ಕಲಾವಿದ, ಸಾಹಿತಿ ಮಠಾಧೀಶರೆಂದರೆ, ಪೂಜ್ಯ. ಶ್ರೀ. ಸಿ.ಜಿ.ಸ್ವಾಮಿಗಳು. ಇವರು ಮೂಲತಃ ಸೇಡಂ ತಾಲೂಕಿನ ದೇವನೂರಿನ ನರಸಪ್ಪ ಮತ್ತು ಯಂಕಮ್ಮ ದಂಪತಿಗಳಿಗೆ ದಿನಾಂಕ ೨೫-೧೦-೧೯೦೧ರಲ್ಲಿ ಜನಿಸಿದ್ದಾರೆ. ಮುಲ್ಕಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಇವರು ಬೀದರ ಜಿಲ್ಲೆ ಹುಮನಾಬಾದ ತಾಲೂಕಿನ ಬೆಮಳಖೇಡದ ಉರಿಲಿಂಗ ಪೆದ್ದಿ ಮಠದ ಪೀಠಾಧಿಪತಿಗಳಾಗಿದ್ದರು. ಮತ್ತು ದಲಿತ ಜನರಿಗೆ ಲಿಂಗ ದೀಕ್ಷೆಯನ್ನು ನೀಡಿ ಶರಣ ಸಂಸ್ಕಾರವನ್ನು ನೀಡಿರುವ ಇವರು ಸಾಹಿತಿಗಳಾಗಿ `ರಾಜ ನೀತಿ,' ಮತ್ತು `ಭಕ್ತ ಮಾರ್ಕಂಡೇಯ' ಎಂಬ ನಾಟಕಗಳನ್ನು ರಚಿಸಿ ಅವುಗಳ ಪ್ರದರ್ಶನಕ್ಕೆ ನಿರ್ದೇಶನ ಮಾಡಿದ್ದಾರೆ. ಅಷ್ಟೇಯಲ್ಲದೆ ಹಲವಾರು ವಚನ, ತತ್ವಪದಗಳು ಬರೆದಿದ್ದಾರೆ. ಇವರು ಉತ್ತಮ ಸಂಗೀತಗಾರರು ಹಾಗೂ ಹಾರ್ಮೋನಿಯಂ ವಾದಕರಾಗಿದ್ದರಿಂದ ೨೦೦೧ರಲ್ಲಿ ಶ್ರೀಗಳಿಗೆ ತುಲಾಭಾರ ಮಾಡಿ ಅವರ ಕುರಿತಾದ ಕಿರು ಪರಿಚಯ ಪುಸ್ತಕವು ಪ್ರಕಟಿಸಲಾಗಿದೆ.

ಮುಡಬಿ ಗುಂಡೆರಾವ್

`ಮುಡಬಿ ಗುಂಡೆರಾವ್' ಎಂದೇ ಖ್ಯಾತರಾಗಿ ಸಂಶೋಧನಾ ಸಾಹಿತ್ಯ ರಚಿಸಿ, ಮೂರು ದಶಕಗಳಿಂದ ಲೇಖಕರಾಗಿ ಗುರುತಿಸಿಕೊಂಡಿದ್ದಾರೆ. ಇವರು ಕಲಬುರಗಿ ಜಿಲ್ಲೆ ನೂತನ ಕಮಲಾಪೂರ ತಾಲ್ಲೂಕಿನ ಹೊಡಲ್ ಗ್ರಾಮದ ಅಂಬಾರಾಯ ಪೋಲಿಸ್ ಪಾಟೀಲ್. ಮತ್ತು ಮಹಾಂತಬಾಯಿ ದಂಪತಿಗಳಿಗೆ ದಿನಾಂಕ ೧-೬-೧೯೬೭ರಲ್ಲಿ ಜನಿಸಿದ್ದಾರೆ. ಎಂ.ಎ. ಎಂ.ಫೀಲ್ ಪದವಿಧರರಾದ ಇವರು ಸೇಡಂ ತಾಲೂಕಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ೨೦ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಮತ್ತು ಸೇಡಂ ತಾಲ್ಲೂಕಿನ ಸ್ಮಾರಕಗಳ ಸಾಂಸ್ಕೃತಿಕ ಒಂದು ಅಧ್ಯಯನ' ಎಂಬುದು ಇವರ ಎಂ.ಫೀಲ್ ಪ್ರಬಂಧವಾಗಿದೆ. ವಿದ್ಯಾರ್ಥಿಯಾಗಿರುವಾಗಲೇ ಸಂಶೋಧನಾ ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಂಡು `ಸೇಡಂ ಐತಿಹಾಸಿಕ ಸ್ಮಾರಕಗಳು, ಸೇಡಿಂಬ ದುರ್ಗದ ಶಾಸನಗಳು, ಸೇಡಂ ತಾಲ್ಲೂಕು ದರ್ಶನ, ಮನ್ನೆದಡಿ ಸಾಸಿರ ನಾಡು, ಮಾನ್ಯಖೇಟದ ಸಿರಿ, ಆಳಂದ ಸಾಸಿರ ನಾಡು, ಕಾಳಗಿ ಕಾಳೇಶ್ವರ, ಮಾನ್ಯಖೇಟ'. (ಸಂಶೋಧನಾ ಕೃತಿಗಳು) `ಸ್ವಾಭಿಮಾನ- ೧.೨, `ನಡೆದಾಡುವ ದೇವರು ಡಾ.ಶಿವಕುಮಾರ ಸ್ವಾಮಿಜಿ,’ ಮತ್ತು `ಆಲ್ಲೂರಿನ ಕೆಂಚ ವೃಷಭೇಂದ್ರ ಶ್ರೀಗಳು' (ಚರಿತ್ರೆಗಳು) `ಸಂಗೀತ ಸಂಪದ' (ವ್ಯಕ್ತಿ ಚಿತ್ರಗಳು) `ಭಾವೈಕ್ಯದ ಕ್ಷೇತ್ರ ಮಳಖೇಡ ದರ್ಗಾ' (ಲೇಖನ) `ಸಾಹಿತ್ಯ ಚಿಲುಮೆ' (ಸಂಪಾದನೆ) ಇತ್ಯಾದಿ ೧೮ ಕೃತಿಗಳು ಪ್ರಕಟಿಸಿದ್ದಾರೆ. ಇವರ ಸಂಶೋಧನಾ, ಲೇಖನ ಬರಹಗಳು ಕೆಲ ಪ್ರಮುಖ ಪತ್ರಿಕೆ ಹಾಗೂ ಆಕಾಶವಾಣಿಯಲ್ಲಿ ಪ್ರಕಟ, ಪ್ರಸಾರವಾಗಿವೆ. ಇವರು ೨೦ವರ್ಷಗಳಿಂದ ಸೇಡಂ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ, ಮತ್ತು ಒಂದು ಅವಧಿಗೆ ಕಸಾಪ ತಾಲೂಕಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇವರ ಕಸಾಪ ಅವಧಿಯಲ್ಲಿ ಒಂದು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ಹಲವು ಹೋಬಳಿ, ಗ್ರಾಮ ಮಟ್ಟದ ಸಾಹಿತ್ಯ ಸಮ್ಮೇಳನ ಹಾಗೂ ಹಲವಾರು ಗ್ರಾಮೀಣ ಪ್ರದೇಶದಲ್ಲಿ ಸಾಹಿತ್ಯ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ. ಇವರಿಗೆ ೨೦೦೯ರಲ್ಲಿ ಕಲಬುರಗಿ ಜಿಲ್ಲಾ ಪ್ರಥಮ ಯುವ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ, ೨೦೧೯ರಲ್ಲಿ ಸೇಡಂ ತಾಲ್ಲೂಕಿನ ೯ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಿ ಗೌರವಿಸಲಾಗಿದೆ. ಅಷ್ಟೇಯಲ್ಲದೆ ಇವರಿಗೆ ನಾಡಿನಾದ್ಯಂತ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ. ಸದ್ಯ ಇವರು ಸೇಡಂ ತಾಲ್ಲೂಕಿನಲ್ಲಿ ವಾಸವಾಗಿದ್ದಾರೆ.