Translate
ಚಿತ್ತಾಪೂರ ತಾಲೂಕಿನ ಸಾಹಿತಿಗಳು ಲೇಬಲ್ನೊಂದಿಗೆ ಪೋಸ್ಟ್ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್ಗಳನ್ನು ತೋರಿಸಿ
ಚಿತ್ತಾಪೂರ ತಾಲೂಕಿನ ಸಾಹಿತಿಗಳು ಲೇಬಲ್ನೊಂದಿಗೆ ಪೋಸ್ಟ್ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್ಗಳನ್ನು ತೋರಿಸಿ
ಗುರುವಾರ, ಜನವರಿ 16, 2025
ಡಾ.ಚಿತ್ರಶೇಖರ ಚಿರಳ್ಳಿ
ಡಾ.ಚಿತ್ರಶೇಖರ ಚಿರಳ್ಳಿ ಯವರು ಕಲಬುರಗಿ ಜಿಲ್ಲೆ ಚಿತ್ತಾಪೂರ ತಾಲೂಕಿನ ರಾಜಾಪೂರ ಗ್ರಾಮದ ಸಿದ್ರಾಮಪ್ಪಾ ಮತ್ತು ಸುಂದ್ರಮ್ಮ ದಂಪತಿಗಳಿಗೆ ದಿನಾಂಕ ೧-೭-೧೯೭೨ರಲ್ಲಿ ಜನಿಸಿದ್ದಾರೆ. ಎಂ.ಎ. ಎಂ.ಫೀಲ್. ಪಿ.ಎಚ್.ಡಿ ಪದವಿಧರರಾದ ಇವರು ೧೯೯೯ರಲ್ಲಿ ಕಲಬುರಗಿ ಆಕಾಶವಾಣಿಯಲ್ಲಿ ಉದ್ಘೋಷಕರಾಗಿ ೨೦೦೧ರಿಂದ ಸೇವೆಗೆ ಸೇರಿ ಎರಡು ವರ್ಷ ಕಾರ್ಯನಿರ್ವಹಿಸಿದ್ದಾರೆ. ಮತ್ತು ಬಾನುಲಿಯಿಂದ ಹಾಸ್ಯ-ಲಾಸ್ಯ, ಮಹಿಳಾ ಕಾರ್ಯಕ್ರಮ, ಸಂದರ್ಶನಗಳು ನಡೆಸಿ ಕೇಳುಗರ ಮನೆ ಮಾತಾಗಿದ್ದರು. ನಂತರ ೨೦೦೧ರಿಂದ ೨೦೦೯ ರವರೆಗೆ ಬಸವಕಲ್ಯಾಣದ ಖಾಸಗಿ ಪದವಿ ಕಾಲೇಜಿನಲ್ಲಿ ಸೇವೆ ಸಲ್ಲಿಸಿದ ನಂತರ ೨೦೦೯ರಿಂದ ಬಸವಕಲ್ಯಾಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರದ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬಾಲ್ಯದಿಂದಲೂ ಸಾಹಿತ್ಯ ಕ್ಷೇತ್ರದಲ್ಲಿ ತುಂಬ ಆಸಕ್ತರಾಗಿದ್ದ ಇವರು ಕತೆ, ಕವನ, ಲೇಖನ, ಆಧುನಿಕ ವಚನ ಸೇರಿದಂತೆ ಮೊದಲಾದ ಬರಹಗಳು ಬರೆದಿದ್ದಾರೆ. ಮತ್ತು `ಬಸವೇಶ್ವರ ಮತ್ತು ಅಸ್ಪೃಶ್ಯತೆ ನಿರ್ಮೂಲನೆ' ಎಂಬ ಕೃತಿಯು ರಚಿಸಿದ್ದಾರೆ. ಇವರ ಬರಹಗಳು ಪ್ರಜಾವಾಣಿ, ವಿಜಯ ಕರ್ನಾಟಕ, ಕರ್ಮವೀರ ಇತ್ಯಾದಿ ಪತ್ರಿಕೆ ಹಾಗೂ ಪ್ರಾತಿನಿಧಿಕ ಸಂಕಲನಗಳಲ್ಲಿ ಮತ್ತು ಆಕಾಶವಾಣಿ ದೂರದರ್ಶನಗಳಲ್ಲಿಯು ಪ್ರಕಟ, ಪ್ರಸಾರವಾಗಿವೆ. ಇವರು ಬಸವಕಲ್ಯಾಣ ತಾಲೂಕಿನ ವಚನ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ, ಕರ್ನಾಟಕ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Labels:
ಚಿತ್ತಾಪೂರ ತಾಲೂಕಿನ ಸಾಹಿತಿಗಳು
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)